ಬಂಟ್ವಾಳ: ಬಾವಿಗಿಳಿದ ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು: ಶುಚಿ ಮಾಡಲೆಂದು ಬಾವಿಗಿಳಿದ ಇಬ್ಬರು ಕಾರ್ಮಿಕರು ಆಮ್ಲಜನಕದ ಕೊರತೆಯಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಕುಕ್ಕಿಲ ನಿವಾಸಿ ಈಗ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ರಾಹಿಂ ಹಾಗೂ ಮಲಾರ್ ನಿವಾಸಿ ಅಲಿ ಮೃತಪಟ್ಟವರು.

ಅಳಕೆ ಸಮೀಪ ಪಡಿಬಾಗಿಲಿನಲ್ಲಿ ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ಬಳಿಕ ಬಾವಿಯನ್ನು ಶುಚಿಗೊಳಿಸಲು ಓರ್ವ ಕಾರ್ಮಿಕ ಬಾವಿಗಿಳಿದಿದ್ದರು. ಆದರೆ ಕೆಳಗಿಳಿದ ಕಾರ್ಮಿಕ ಮೇಲೆ ಬರಲಾರದೆ ಒದ್ದಾಡುತ್ತಿದ್ದಾಗ ಮತ್ತೋರ್ವ ಕಾರ್ಮಿಕ ಅವರನ್ನು ಮೇಲಕ್ಕೆತ್ತಲು ಬಾವಿಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಅವರಿಗೂ ಅದೇ ಸ್ಥಿತಿಯುಂಟಾಗಿದೆ. ಕೆಳಗಿಳಿದ ಇಬ್ಬರೂ ಆಮ್ಲಜನಕದ ಕೊರತೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಇಬ್ರಾಹಿಂ ಕಳೆದ 20 ವರ್ಷಗಳಿಂದ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Latest Indian news

Popular Stories