ಬೆಳ್ತಂಗಡಿ: ಸಾಫ್ಟ್’ವೇರ್ ಇಂಜಿನಯರ್ ಮೃತ್ಯು

ಬೆಳ್ತಂಗಡಿ, ಅಕ್ಟೋಬರ್ 12: ಅಕ್ಟೋಬರ್ 11 ರಂದು ಆಯಧ ಪೂಜೆಯ ಸಂದರ್ಭದಲ್ಲಿ 29 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ

ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ.

ಆದಿತ್ಯ ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿತು.ಇದು ಹೃದಯ ಸ್ತಂಭನಕ್ಕೆ ಕಾರಣವಾಯಿತು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು ಸಂಬಂಧಿಕರನ್ನು ಅಗಲಿದ್ದಾರೆ.

Latest Indian news

Popular Stories