ಆಡಿಯೋ ಮೂಲಕ ಶರಣ್ ಪಂಪ್‌ವೆಲ್‌ಗೆ ಸವಾಲು: ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನಲ್ಲಿ ಸೋಮವಾರ ಈದ್ ಮಿಲಾದ್ ರ‌್ಯಾಲಿ ನಡೆಸುತ್ತೇವೆ ತಾಕತ್ತಿದ್ದರೆ ತಡೆಯಿರಿ ಎಂದು ಆಡಿಯೋ ಮೂಲಕ ಸವಾಲು ಹಾಕಿದ್ದಾರೆ ಎಂಬ ಆರೋಪದಲ್ಲಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಗಣೇಶೋತ್ಸವ ಮೆರವಣಿಗೆ ವೇಳೆ ಮಂಡ್ಯದಲ್ಲಿ ನಡೆದ ಗಲಾಟೆ ಯನ್ನು ಖಂಡಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ “ಇದೇ ರೀತಿ ಮುಂದುವರಿದರೆ ಈದ್ ಮಿಲಾದ್ ರ‌್ಯಾಲಿಯನ್ನು ತಡೆಯುವುದಾಗಿ” ಶರಣ್ ಪಂಪ್‌ವೆಲ್ ಹೇಳಿಕೆ ನೀಡಿದ್ದರು. ಇದು ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿತ್ತು. ಇದಕ್ಕೆ ಪ್ರತಿಯಾಗಿ ಮುಹಮ್ಮದ್ ಶರೀಫ್ ಆಡಿಯೋ ಮೂಲಕ ತಾಕತ್ತಿದ್ದರೆ ಈದ್ ಮಿಲಾದ್ ರ‌್ಯಾಲಿ ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು. ಈ ನಿಟ್ಟಿನಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories