ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಕಲ್ಲು ಇಟ್ಟರೇ ಕಿಡಿಗೇಡಿಗಳು?: ಭಾರೀ ಸದ್ದಿಗೆ ಬೆಚ್ಚಿ‌ಬಿದ್ದ ಸ್ಥಳೀಯರು

ಮಂಗಳೂರು: ತೊಕ್ಕೊಟ್ಟು ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಕೇಳಿ ಸ್ಥಳೀಯರಿಗೆ ಮನೆಗಳಲ್ಲಿ ಕಂಪನದ ಅನುಭವವಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಶನಿವಾರ ರಾತ್ರಿ ಮಂಗಳೂರಿನಿಂದ ಕೇರಳದ ಕಡೆಗೆ ಹೋಗುವ ರೈಲೊಂದು ದೊಡ್ಡ ಸದ್ದಿನೊಂದಿಗೆ ಸಂಚರಿಸಿದೆ. ಆದರೆ ಸ್ಥಳೀಯರು ಇದನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ಅದೇ ರೀತಿ ದೊಡ್ಡ ಸದ್ದು ಕೇಳಿ ಬಂದಿದೆ. ಪರಿಣಾಮ ಸ್ಥಳೀಯ ಕೆಲವು ಮನೆಗಳಲ್ಲಿಯ ಕಂಪನದ ಅನುಭವವಾಗಿದೆ.

ತಕ್ಷಣವೇ ಸ್ಥಳೀಯರು ರೈಲು ಅಪಘಾತವೆಂದು ಭಾವಿಸಿ ಹಳಿಯತ್ತ ದೌಡಾಯಿಸಿದ್ದಾರೆ. ಈ ವೇಳೆ ಹಳಿ ಮೇಲಿರಿಸಲಾದ ಜಲ್ಲಿಕಲ್ಲುಗಳು ತುಂಡಾಗಿರುವುದು ಕಂಡು ಬಂದಿದೆ.

ಶನಿವಾರ ರಾತ್ರಿ ಇಬ್ಬರು ಅಪರಿಚಿತರನ್ಮು ಇದೇ ರೈಲು ಹಳಿ ಬಳಿ ನೋಡಿರುವುದಾಗಿ ಮಹಿಳೆಯರಿಬ್ಬರು ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ.

Latest Indian news

Popular Stories