ಮಂಗಳೂರು: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲು ಬಡಿದು ಮೃತ್ಯು

ಮಂಗಳೂರು, ಮೇ.03: ಸಿಡಿಲು (lightning) ಬಡಿದು ನವವಿವಾಹಿತ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತ ರ್ದುದೈವಿ.

ಹತ್ತು ದಿನದ ಹಿಂದೆಯಷ್ಟೇ ವಿವಾಹವಾಗಿದ್ದ ಸೋಮಸುಂದರ್, ಸಂಜೆಯ ವೇಳೆ ಸುಬ್ರಮಣ್ಯ ಭಾಗದಲ್ಲಿ ಭಾರೀ ಸಿಡಿಲು ಬಡಿದಿದೆ. ಮಳೆ ಮುನ್ಸೂಚನೆ ಹಿನ್ನಲೆ ಅಂಗಳದಲ್ಲಿದ್ದ ಅಡಿಕೆ ರಾಶಿ ಮಾಡುತ್ತಿದ್ದ ವೇಳೆ ಸೋಮ ಸುಂದರ್ ಗೆ ಸಿಡಿಲು ಬಡಿದಿದ್ದು, ಆಸ್ಪತ್ರೆ ಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ.

Latest Indian news

Popular Stories