Dakshina Kannada
ನವೆಂಬರ್ 8 : “ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು” ಸಾರ್ವಜನಿಕ ಸಮಾವೇಶ

ಮಂಗಳೂರು: ಪ್ರವಾದಿ ಮುಹಮ್ಮದ್ ರವರು ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲುಗಳು ಎಂಬ ಧ್ಯೇಯದೊಂದಿಗೆ ನವಂಬರ್ 8 ಶುಕ್ರವಾರ ಸಂಜೆ 6:40ಕ್ಕೆ ಮಂಗಳೂರಿನ ಪುರಭವನದಲ್ಲಿ ಸಾರ್ವಜನಿಕ ಸಮಾವೇಶವನ್ನು ಆಯೋಜಿಸಲಾಗಿದೆ.
ಇವತ್ತಿನ ಸಮಾಜದಲ್ಲಿ ಮೌಲ್ಯಾಧಾರಿತ ಸಮಾಜದ ರಚನೆಗೆ ಎದುರಾಗುತ್ತಿರುವ ಸವಾಲುಗಳೇನು ಎಂಬುದರ ವಿಶ್ಲೇಷಣೆಯು ಈ ಸಮಾವೇಶದಲ್ಲಿ ನಡೆಯಲಿದೆ. ಸಾಮಾಜಿಕ ಮೌಲ್ಯಗಳು ಮತ್ತು ತತ್ವಗಳನ್ನು ಚರ್ಚೆಗೊಡ್ಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂಥದೊಂದು ಕಾರ್ಯಕ್ರಮದ ಮಾಹಿತಿಯನ್ನ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ
ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರ ಅಧ್ಯಕ್ಷ ಇಸಾಕ್ ಪುತ್ತೂರು ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾರತೀಯ ಪ್ರಾದೇಶಿಕ ಸೇನೆಯ ಲೆಫ್ಟಿನೆಂಟ್ ಭವ್ಯ ನರಸಿಂಹಮೂರ್ತಿ, ಸಾಮಾಜಿಕ ಚಿಂತಕ ನ್ಯಾಯವಾದಿ ಸುಧೀರ್ ಕುಮಾರ್ ಮುರೋಳ್ಳಿ, ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಿ ಮಾತನಾಡಲಿದ್ದಾರೆ.