ಬೆಂಗಳೂರು: ರಾಜ್ಯ ಬಿಜೆಪಿ ವಲಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರೂ ಎನ್ನವ ಕುರಿತು ಚರ್ಚೆಗಳು ನಡೆಯುತ್ತಿದೆ. ವಿಶೇಷ ಬೆಳವಣಿಗೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ಸಿಎಂ ರೇಸ್ ನಲ್ಲಿರುವ ಮುರುಗೇಶ್ ನಿರಾಣಿ ಹಾಗೂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ.
ಕಾವೇರಿ ನಿವಾಸದಲ್ಲಿ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ದೆಹಲಿ ಭೇಟಿ ಬಳಿಕ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಮುರುಗಶ ನಿರಾಣಿ ಅವರು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮುರುಗೇಶ್ ನಿರಾಣಿ ಜೊತೆ ಬಸವರಾಜ್ ಬೊಮ್ಮಾಯಿ ಕೂಡ ಬಿಎಸ್ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಮುರುಗೇಶ ನಿರಾಣಿ ಅವರಲ್ಲದೆ, ಬಸವರಾಜ ಬೊಮ್ಮಾಯಿ ಅವರ ಹೆಸರೂ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬರುತ್ತಿದೆ.