ಉತ್ತರಾಖಂಡ್: ಓರ್ವ ಶಾಸಕ, ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ದಿಢೀರ್ ರಾಜೀನಾಮೆ, “ಕೈ” ಸೇರುವ ಸಾಧ್ಯತೆ

ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್ ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡಿಕೆಯಾಗಿದ್ದು, ಅದನ್ನು ನಿರ್ಲಕ್ಷ್ಯಿಸಲಾಗಿದೆ” ಎಂದು ತಮ್ಮ ರಾಜೀನಾಮೆಗೆ ಕಾರಣವಾಗಿರುವ ಅಸಮಾಧಾನವನ್ನು ಹರಕ್ ಸಿಂಗ್ ರಾವತ್ ಬಹಿರಂಗಪಡಿಸಿದ್ದಾರೆ.

ಆದರೆ ಬಿಜೆಪಿ ಮಾತ್ರ ಅಸಮಾಧಾನವನ್ನು ಶೀಘ್ರವೇ ಪರಿಹರಿಸುವುದಾಗಿ ಹೇಳಿದೆ. ಈ ವರದಿ ಪ್ರಕಟವಾಗುವವರೆಗೂ ಉತ್ತರಾಖಂಡ್ ನ ರಾಜ್ಯಪಾಲರು ಯಾವುದೇ ರಾಜೀನಾಮೆಯನ್ನೂ ಅಂಗೀಕರಿಸಿಲ್ಲ.

ಹರಕ್ ಸಿಂಗ್ ರಾವತ್ ಡಿ.23 ರಂದು ದೆಹಲಿಯಲ್ಲಿದ್ದರು ಅವರು ಹರಿದ್ವಾರದಲ್ಲಿ ಮಾಜಿ ಸಿಎಂ ಹರೀಶ್ ರಾವತ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕೆಲವು ಮೂಲಗಳು ಹೇಳಿದರೆ, ಬಿಜೆಪಿ ಮಾತ್ರ ಇದು ಕೇವಲ ವದಂತಿಯಷ್ಟೇ ಎಂದು ಸುದ್ದಿಯನ್ನು ಅಲ್ಲಗಳೆದಿದೆ. ಅಷ್ಟೇ ಅಲ್ಲದೇ ಯಾವುದೇ ವಿಷಯವಿರಲಿ ಅದನ್ನು ಶೀಘ್ರವೇ ಬಗೆಹರಿಸುವುದಾಗಿ ತಿಳಿಸಿದೆ.

Latest Indian news

Popular Stories