ಹೊಸದಿಲ್ಲಿ: “ಪಟಾಕಿಗಳಿಗೆ ಸಂಪೂರ್ಣವಾಗಿ ನಿಷೇಧ ಹೇರಲು ಸಾಧ್ಯವಿಲ್ಲ.’ ದೀಪಾವಳಿ ಹಬ್ಬಕ್ಕೂ ಮುನ್ನವೇ ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿರುವುದು ದೇಶದ ಸರ್ವೋಚ್ಚ ನ್ಯಾಯಾಲಯ. ಪಶ್ಚಿಮ ಬಂಗಾಳದಲ್ಲಿ ಕಾಳಿ ಪೂಜೆ, ದೀಪಾವಳಿ, ಕ್ರಿಸ್ಮಸ್ ಸೇರಿದಂತೆ ಈ ವರ್ಷ ಎಲ್ಲ ಹಬ್ಬಗಳಲ್ಲೂ ಪಟಾಕಿಗೆ ಸಂಪೂರ್ಣ ನಿಷೇಧ ಹೇರಿ ಕಲ್ಕತ್ತಾ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ರದ್ದು ಮಾಡುವ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪಟಾಕಿಗಳಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗದು. ಅದರ ಬದಲಿಗೆ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಿ. ಜತೆಗೆ, ನಿಷೇಧಿತ ಪಟಾಕಿಗಳು ಮತ್ತು ಅದಕ್ಕೆ ಅಗತ್ಯವಿರುವ ಕಚ್ಚಾ ವಸ್ತುಗಳನ್ನು ರಾಜ್ಯಕ್ಕೆ ತರದಂತೆ ಸೂಕ್ತ ಕ್ರಮ ಕೈಗೊಳ್ಳಿ’ ಎಂದು ಪ.ಬಂಗಾಲ ಸರ್ಕಾರಕ್ಕೆ ಸೂಚಿಸಿದೆ.