ಬಾರಾಬಂಕಿ: ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಅನ್ನು ಶೀಘ್ರವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಸಿಎಎ ಮತ್ತು ಎನ್ಆರ್ಸಿ ರದ್ದುಪಡಿಸದಿದ್ದರೆ, ಪ್ರತಿಭಟನಾಕಾರರು ಬೀದಿಗಿಳಿದು ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.
“ಸಿಎಎ ಸಂವಿಧಾನಕ್ಕೆ ವಿರುದ್ಧವಾಗಿದೆ. ಬಿಜೆಪಿ ಸರ್ಕಾರ ಈ ಕಾನೂನನ್ನು ಹಿಂತೆಗೆದುಕೊಳ್ಳದಿದ್ದರೆ, ನಾವು ಬೀದಿಗಿಳಿಯುತ್ತೇವೆ ಮತ್ತು ಇಲ್ಲಿ ಮತ್ತೊಂದು ಶಾಹೀನ್ ಬಾಗ್ ಬರುತ್ತದೆ ”ಎಂದು ಓವೈಸಿ ಭಾನುವಾರ ಸಂಜೆ ಬಾರಾಬಂಕಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಹೇಳಿದರು.
ಪ್ರಧಾನಿ ಮೋದಿ ದೇಶದ ದೊಡ್ಡ ‘ನೌತಂಕಿಬಾಜ್’ ಆಗಿದ್ದು, ತಪ್ಪಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇಲ್ಲದಿದ್ದರೆ ಚಿತ್ರರಂಗದ ಮಂದಿಗೆ ಏನಾಗುತ್ತಿತ್ತು. ಎಲ್ಲ ಪ್ರಶಸ್ತಿಗಳೂ ಮೋದಿಯವರ ಪಾಲಾಗುತ್ತಿತ್ತು ಎಂದು ಓವೈಸಿ ಹೇಳಿದ್ದಾರೆ.
“ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ನಂತರ, ಪ್ರಧಾನಿ ತಮ್ಮ ‘ತಪಸ್ಯ’ (ತಪಸ್ಸು) ನಲ್ಲಿ ಕೆಲವು ನ್ಯೂನತೆಗಳಿವೆ ಎಂದು ಹೇಳಿದ್ದರು. ಇದು ನಮ್ಮ ಪ್ರಧಾನಿಯ ಎಂತಹ ದೊಡ್ಡ ನಟ ಎಂಬುದನ್ನು ಹೇಳುತ್ತದೆ ಎಂದು ಅವರು ಹೇಳಿದರು.