ದೇಶದಲ್ಲಿ ಮೊಘಲರ ನಂತರವೇ ಬಿಜೆಪಿ-ಆರ್‌ಎಸ್‌ಎಸ್: ಅಸಾದುದ್ದೀನ್ ಓವೈಸಿ ವಾಗ್ದಾಳಿ

ಭಿವಂಡಿ (ಮಹಾರಾಷ್ಟ್ರ): ‘ದೇಶದಲ್ಲಿ ಮೊಘಲರ ನಂತರವೇ ಬಿಜೆಪಿ -ಆರ್‌ಎಸ್‌ಎಸ್’ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಭಿವಂಡಿಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಭಾರತ ನನ್ನದಲ್ಲ, ಠಾಕ್ರೆಯವರದ್ದಲ್ಲ, ಮೋದಿ- ಅಮಿತ್‌ ಶಾ ಅವರದ್ದಲ್ಲ, ಭಾರತವು ಯಾರದ್ದು ಎಂದರೆ, ಅದು ದ್ರಾವಿಡರು ಮತ್ತು ಆದಿವಾಸಿಗಳದ್ದು. ಆಫ್ರಿಕಾ, ಇರಾನ್, ಮಧ್ಯ ಏಷ್ಯಾ, ಪೂರ್ವ ಏಷ್ಯಾ ಭಾಗದಿಂದ ಜನರು ವಲಸೆ ಬಂದ ನಂತರ ಭಾರತ ರಚನೆಯಾಗಿದೆ. ಆದರೆ, ದೇಶದಲ್ಲಿ ಮೊಘಲರ ನಂತರವೇ ಬಿಜೆಪಿ –ಆರ್‌ಎಸ್‌ಎಸ್‌ನವರು’ ಎಂದು ಕಿಡಿಕಾರಿದ್ದಾರೆ.

ಬಳಿಕ ಎನ್‌ಸಿಪಿ ನಾಯಕ ಶರದ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ‘ನವಾಬ್ ಮಲಿಕ್ ಬಂಧನದ ಬಗ್ಗೆ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಭೇಟಿ ಮಾಡಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕೆ ಭೇಟಿ ಮಾಡಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ, ಎನ್‌ಸಿಪಿ, ಕಾಂಗ್ರೆಸ್ ಸೇರಿದಂತೆ ಇತರೆ ಜಾತ್ಯಾತೀತ ಪಕ್ಷಗಳ ನಾಯಕರು ಜೈಲಿಗೆ ಹೋಗಬಾರದು ಎಂದು ಭಾವಿಸುತ್ತಾರೆ. ಆದರೆ, ಯಾರಾದರೂ ಮುಸ್ಲಿಮರು ನಾಯಕರು ಜೈಲಿಗೆ ಹೋದರೂ ಪರವಾಗಿಲ್ಲ’ ಎಂದು ಹೇಳುವ ಮೂಲಕ ಓವೈಸಿ, ಎನ್‌ಸಿಪಿ, ಶಿವಸೇನೆ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

‘ಶರದ್ ಪವಾರ್ ಅವರು ಸಂಜಯ್ ರಾವತ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಒತ್ತಾಯಿಸಲು ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಹೋಗಿದ್ದಾರೆ. ಆದರೆ, ನವಾಬ್ ಮಲಿಕ್‌ ಪರವಾಗಿ ಪವಾರ್ ಅವರು ಅದೇ ಕೆಲಸವನ್ನು ಏಕೆ ಮಾಡಲಿಲ್ಲ’ ಎಂದು ಪ್ರಶ್ನಿಸಿದರು.

‘ನವಾಬ್ ಮಲಿಕ್ ಸಂಜಯ್ ರಾವತ್ ಅವರಿಗಿಂತ ಕಡಿಮೆಯೇ? ನೀವು ನವಾಬ್ ಮಲಿಕ್ ಪರವಾಗಿ ಏಕೆ ಮಾತನಾಡಲಿಲ್ಲ? ನವಾಬ್ ಮಲಿಕ್ ಅವರು ಮುಸ್ಲಿಂ ಎಂಬ ಕಾರಣಕ್ಕಾಗಿಯೇ? ಸಂಜಯ್ ಮತ್ತು ನವಾಬ್ ಸಮಾನರಲ್ಲವೇ ಎಂದು ನಾನು ಶರದ್ ಪವಾರ್ ಅವರನ್ನು ಕೇಳಲು ಬಯಸುತ್ತೇನೆ’ ಎಂದರು.

ಇದೇ ವೇಳೆ ಭಿವಂಡಿ ನಾಯಕ ಖಾಲಿದ್ ಗುಡ್ಡು ಅವರನ್ನು ಬಿಡುಗಡೆ ಮಾಡುವಂತೆಯೂ ಒವೈಸಿ ಒತ್ತಾಯಿಸಿದರು.

ಖಾಲಿದ್ ಗುಡ್ಡು ಅವರನ್ನು ವಂಚನೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಜೈಲಿನಲ್ಲಿದ್ದಾರೆ ಮತ್ತು ಅವರ ಮೇಲೆ ದಾಖಲಾಗಿರುವ ಪ್ರಕರಣಗಳು ತಪ್ಪಾಗಿದೆ. ದಯವಿಟ್ಟು ಖಾಲಿದ್ ಗುಡ್ಡುವನ್ನು ಬಿಡುಗಡೆ ಮಾಡುವಂತೆ ನಾನು ಶಿವಸೇನೆ ಮತ್ತು ಮುಖ್ಯಮಂತ್ರಿಗಳಲ್ಲಿ ವಿನಂತಿಸುತ್ತೇನೆ” ಎಂದು ಹೇಳಿದರು.

ಅಧಿಕಾರ ಮತ್ತು ಭ್ರಷ್ಟಾಚಾರದ ವಿರುದ್ಧದ ಇದ್ದ ಕಾರಣ ಖಾಲಿದ್ ಗುಡ್ಡು ಅವರನ್ನು ಬಂಧಿಸಲಾಗಿದೆ. ರಾಜ್ಯ ಸರ್ಕಾರವು ಮುಂಬೈ ಪೊಲೀಸರ ಸಹಾಯದಿಂದ ಗುಡ್ಡು ಅವರನ್ನು ಬಂಧಿಸಿದೆ ಎಂದು ತಿಳಿಸಿದರು.

Latest Indian news

Popular Stories