ಕಾಪು: ಮಲ್ಲಾರಿನ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಮೃತರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.
ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಿ ಅಂಗಡಿಯ ಕಾರ್ಮಿಕ ಈರಪ್ಪ ಎಂಬವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ ಗುಜರಿ ಅಂಗಡಿಯ ಪಾಲುದಾರ ರಜಬ್ ಬ್ಯಾರಿ ಚಂದ್ರನಗರ, ಮ್ಯಾನೇಜರ್ ರಜಬ್ ಅಲಿ ಮಲ್ಲಾರು ಸ್ಥಳದಲ್ಲೇ ಮೃತಪಟ್ಟಿದ್ದರು. ನಿಯಾಝ್ ಆಸ್ಪತ್ರೆಯಲ್ಲಿ ಮೃತಪಟ್ಡಿದ್ದರು.
ಈರಪ್ಪ ಸಹಿತ 5 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಗಾಯಾಳುಗಳ ಪೈಕಿ ಹಸನಬ್ಬ, ವೀರೇಶ್ ಮತ್ತು ಫಹೀಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.