ಕಾಶ್ಮೀರ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು “ಉಗ್ರವಾದದ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲುತ್ತಿದ್ದಾರೆ” ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.ಅವರ ಕುಟುಂಬಗಳಿಗೆ ಮೃತದೇಹಗಳನ್ನು ಹಿಂದಿರುಗಿಸುವಂತೆ ಬುಧವಾರ ಒತ್ತಾಯಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಜಮ್ಮುವಿನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಮೆಹಬೂಬಾ ಮುಫ್ತಿ ಅವರು ಹೈದರ್ಪೋರಾ ಎನ್ಕೌಂಟರ್ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದರು. ಕಾಶ್ಮೀರಿಗಳು ಈ ಹಿಂದೆ ಶರಣಾಗಿಲ್ಲ ಅಥವಾ ಅವರು ಈಗ ಬಂದೂಕು ತೋರಿಸಿ ಶರಣಾಗುತ್ತಾರೆಯೇ ಎಂದು ಪ್ರಶ್ನಿಸಿದರು.
“ಈ ಘಟನೆಯ ಕುರಿತು ನಾವು ನ್ಯಾಯಾಂಗ ತನಿಖೆಯನ್ನು ಬಯಸುತ್ತೇವೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು. ಎನ್ಕೌಂಟರ್ನಲ್ಲಿ ಮೂವರು ನಾಗರಿಕರು ಸಾವನ್ನಪ್ಪಿರುವುದು ದುರದೃಷ್ಟಕರ. ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ನಾಗರಿಕರನ್ನು ಓವರ್ ಗ್ರೌಂಡ್ ವರ್ಕರ್ಸ್ (OGWs) ಎಂದು ಬ್ರಾಂಡ್ ಮಾಡುವುದು ಫ್ಯಾಶನ್ ಆಗಿದೆ. ಅವರು ಒಜಿಡಬ್ಲ್ಯೂಗಳು ಎಂದು ತೋರಿಸಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ. ಇಂತಹ ಘಟನೆಗಳು ನಮ್ಮ ವಿರುದ್ಧ ಜನರಲ್ಲಿ ಹೆಚ್ಚು ಕೋಪವನ್ನು ಉಂಟುಮಾಡುತ್ತವೆ” ಎಂದು ಮುಫ್ತಿ ಮಂಗಳವಾರ ಹೇಳಿದ್ದಾರೆ.