ಕುಂದಾಪುರದಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ ತಡೆ

ಕುಂದಾಪುರ : ಹಿಜಾಬ್ ಧರಿಸಿ ಬಂಧ ಕಾರಣಕ್ಕಾಗಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗುರುವಾರ ಕಾಲೇಜಿನ ಗೇಟಿನಲ್ಲಿಯೇ ತಡೆದು ಕಾಲೇಜಿಗೆ ಪ್ರವೇಶ ನಿರಾಕರಿಸಿದ ಬಗ್ಗೆ ವರದಿಯಾಗಿದೆ.

ಬಾಲಕಿಯರ ಪದವಿಪೂರ್ವ ತರಗತಿಯ ವಿವಾದದ ನಂತರ ಇದೀಗ ಕುಂದಾಪುರದಲ್ಲಿ ಕೇಸರಿ ಶಾಲು-ಶಿರವಸ್ತ್ರ ವಿವಾದ ಆರಂಭಗೊಂಡಿದೆ.

ಹಿಜಾಬ್‌ಗೆ ಪ್ರತಿಯಾಗಿ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

Latest Indian news

Popular Stories