ದಿಕ್ಕು ತಪ್ಪಿದ ಪಿಎಸ್‌ಐ ಪರೀಕ್ಷಾ ಅಕ್ರಮ ತನಿಖೆ: ಪ್ರಿಯಾಂಕ್ ಖರ್ಗೆ ಆರೋಪ

ಕಲಬುರಗಿ: ಪಿಎಸ್‌ಐ ಪರೀಕ್ಷಾ ಅಕ್ರಮದ ಕುರಿತು ಸರಕಾರ ನಡೆಸುತ್ತಿರುವ ಸಿಐಡಿ ತನಿಖೆಯ ದಿಕ್ಕು ತಪ್ಪಿದೆ. ರಾಜ್ಯದ ನಾನಾ ಕಡೆಗಳಲ್ಲಿ ಅಕ್ರಮಗಳು ಬಯಲಾಗುತ್ತಿದ್ದರೂ ತನಗೇನು ಸಂಬಂಧವೇ ಇಲ್ಲ ಎನ್ನುವಂತೆ ಸರಕಾರ ವರ್ತನೆ ಮಾಡುತ್ತಿದೆ. ರುದ್ರಗೌಡ ಸೇರಿದಂತೆ ಕಿಂಗ್‌ಪಿನ್‌ಗಳೇ ಸವಾಲು ಹಾಕುತ್ತಿದ್ದರೂ, ಮುಖ್ಯಮಂತ್ರಿಯಾದಿಯಾಗಿ ಗೃಹ ಸಚಿವರು ಸಮರ್ಪಕ ತನಿಖೆಗೆ ಆಸಕ್ತಿ ತೋರುತ್ತಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ನಡೆಸಿದವರು ನೇರವಾಗಿ ಸರಕಾರಕ್ಕೆ ಚಾಲೆಂಜ್ ಮಾಡುತ್ತಿದ್ದರೂ, ಸರಕಾರ ಕೈಲಾದಂತೆ ಸುಮ್ಮನೆ ಕುಳಿತಿದೆ. ವಿಚಾರಣೆ ವೇಳೆ ಉನ್ನತ ಅಧಿಕಾರಿಗಳು, ಮಂತ್ರಿಗಳ ಹೆಸರು ಹೇಳುತ್ತೇನೆ. ಬಂಧಿಸುತ್ತೀರಾ? ಎಂದು ರುದ್ರಗೌಡ ಪ್ರಶ್ನಿಸಿದ್ದಾನೆಂದು ಗೊತ್ತಾಗಿದೆ. ಆದರೂ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮತ್ತು ತಂಡವನ್ನು ಉಳಿಸುವ ನಿಟ್ಟಿನಲ್ಲಿ ಇಡೀ ಸರಕಾರ ಒಂದು ಅಕ್ರಮವನ್ನು ಸರಿಯಾಗಿ ತನಿಖೆ ಮಾಡದೆ ಮುಚ್ಚಿ ಹಾಕುವ ನಿಟ್ಟಿನಲ್ಲಿ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಆಪಾದನೆ ಮಾಡಿದರು.

Latest Indian news

Popular Stories