ಬೆಂಗಳೂರು: ರಾಜ್ಯದಲ್ಲಿ ಪಿ.ಎಸ್.ಐ ಹಗರಣ ಜೋರಾಗಿಯೇ ಸದ್ದು ಮಾಡುತ್ತಿದೆ. ಉನ್ನತ ಮಟ್ಟದ ಅಧಿಕಾರಿಗಳು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಇದೀಗ ಮಾಜಿ ಮುಖ್ಯ ಮಂತ್ರಿ ರಾಜ್ಯ ಸರಕಾರವನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದಾರೆ.
ಪಿಎಸ್ಐ ಹಗರಣದಲ್ಲಿ ಸರ್ಕಾರದ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದ್ದು, ಜನರ ಗಮನ ಬೇರೆಡೆಗೆ ತಿರುಗಿಸಲು ನಮ್ಮ ಪಕ್ಷದ ಶಾಸಕರಾದ ಝಮೀರ್ ಅಹ್ಮದ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ಮೂಲಕ ದಾಳಿ ಮಾಡಿಸಲಾಗಿದೆ.ಇಂಥಾ ರಾಜಕೀಯ ಪ್ರೇರಿತ ಎಸಿಬಿ ದಾಳಿಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.