ಮಂಗಳೂರು, ಆ.15: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸುರತ್ಕಲ್ ಸಮೀಪದ ಮುಕ್ಕ ಎಂಬಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಎಪ್ರಿಲ್ 14ರಂದು ನಡೆದಿದೆ.
ಮೃತರನ್ನು ಬೆಳಾಲು ನಿವಾಸಿ ರಾಘವ ಅಲಿಯಾಸ್ ಜೀವನ್ (35) ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಆದರೆ ಹಳೆಅಂಗಡಿ ಬಳಿ ಕಾರನ್ನು ಪತ್ತೆ ಹಚ್ಚಿ ನಂತರ ಜಪ್ತಿ ಮಾಡಲಾಗಿದೆ.
ರಾಘವ ಅವರು ಧರ್ಮಸ್ಥಳ ಯಕ್ಷಗಾನ ತಂಡಕ್ಕೆ ಟೆಂಟ್ ಹಾಕುತ್ತಿದ್ದರು. ಅವರು ಕೆಲಸಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.