ಉಡುಪಿ: ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು.
ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.
ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ
ಕೇಳಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.