ಹೊಸದಿಲ್ಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕರ್ನಾಟಕದ ಬಳ್ಳಾರಿಯಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಬಳ್ಳಾರಿಯಲ್ಲಿ ಉಳಿಯಲು ಅವಕಾಶ ಮಾಡಿಕೊಡಬೇಕೆಂದು ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಇದರ ವಿಚಾರಣೆ ನಡೆಸಿದ ನ್ಯಾ.ವಿನೀತ್ ಶರಣ್ ಅವರ ನೇತೃತ್ವದ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.