ಮಂಗಳೂರು: ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿವೆ ಎಂದು ಬಿಜೆಪಿ ಮುಖಂಡ ಅನ್ವರ್ ಮಾಣಿಪ್ಪಾಡಿ ವಿಷಾದ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮುದಾಯದ ವಿರುದ್ಧ ದ್ವೇಷ ತುಂಬಿದ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಈ ಕುರಿತು ಪ್ರಧಾನಿ ಮೋದಿಯವರ ಗನಮಕ್ಕೂ ತರಲು ಪ್ರಯತ್ನಿಸಿದೆ. ಸ್ಪಂದನೆ ಸಿಕ್ಕಿಲ್ಲ. ಆದರೆ ಅವರ ಮೇಲೆ ವಿಶ್ವಾಸ ಇದೆ ಎಂದು ಹೇಳಿದರು.