ವಿಜಯಪುರ: ಸೋತ ಬಿಜೆಪಿ ಅಭ್ಯರ್ಥಿ ಹಾಗೂ ಬೆಂಬಲಗರಿಂದ ವ್ಯಕ್ತಿಯ ಮೇಲೆ ಹಲ್ಲೆಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿಜಯಪುರ ನಗರದ ದರ್ಗಾ ಜೈಲು ರಸ್ತೆಯಲ್ಲಿ ಘಟನೆ ನಡೆದಿದೆ. ದೇವಕಾಂತ ಬಿಜ್ಜರಗಿ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 2ರಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ಔರಂಗಾಬಾದ್ ಸೋಲು ಹಿನ್ನಲೆ ಇತನ ಬೆಂಬಲಿಗರು ದೇವಾಕಾಂತ ಮೇಲೆ ಹಲ್ಲೆಗೈದಿದ್ದಾರೆ. ಇದೀಗ್ ದೇವಕಾಂತ ಬಿಜ್ಜರಗಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಐದಾರು ಜನರು ಕಲ್ಲಿನಿಂದ ಹಲ್ಲೆಗೈದಿದ್ದಾರೆ ಎಂದು ಬಿಜ್ಜರಗಿ ಆರೋಪಿಸಿದ್ದಾರೆ.
ಆದರ್ಶ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.