ಶ್ರೀಲಂಕಾ ಎದುರು ಮೂರನೇ ಪಂದ್ಯದಲ್ಲೂ ಗೆದ್ದ ಭಾರತ- ಸರಣಿ ಗೆಲುವು

ಧರ್ಮಶಾಲಾ: 3ನೇ ಟಿ20 ಪಂದ್ಯದಲ್ಲೂ ಶ್ರೀಲಂಕಾ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದ ಭಾರತ ತಂಡ 3-0 ಅಂತರದಲ್ಲಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಧರ್ಮಶಾಲಾದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾ ನೀಡಿದ 147ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ 16.5 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 148ರನ್ ಗಳಿಸಿ 6 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯಗಳಿಸಿತು. ಆರಂಭಿಕ ಆಘಾತದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದಾಗಿ ಭಾರತ ಶ್ರೀಲಂಕಾ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಗೆದ್ದು ಮತ್ತೊಂದು ವೈಟ್ ವಾಶ್ ಜಯ ಸಾಧಿಸಿದೆ. ಲಂಕಾ ವಿರುದ್ಧ ಅಜೇಯ 73ರನ್ ಗಳಿಸಿದ ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಲಂಕಾ ಪರ ಲಾಹಿರು ಕುಮಾರ 2, ಚಮೀರಾ ಮತ್ತು ಕರುಣರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.

Latest Indian news

Popular Stories