ಉಡುಪಿ: ದೆಹಲಿಯಲ್ಲಿ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಮರಣೋತ್ತರ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರ ಪರವಾಗಿ ಅವರ ಪಟ್ಟಶಿಷ್ಯ ಶ್ರೀ ವಿಶ್ವಪ್ರಸನ್ನತೀರ್ಥ ಅವರು ಸ್ವೀಕರಿಸಲಿದ್ದಾರೆ. ಹಾರೇಕಳ ಹಾಜಬ್ಬ ಪ್ರಶಸ್ತಿ ಸ್ವೀಕರಿಸಲು ದೆಹಲಿಗೆ ತೆರಳಿದ್ದಾರೆ.