ಸಹಪಾಠಿಯೊಂದಿಗೆ ಬಸ್ಸಿನಲ್ಲಿ ಪಯಣದ ಸಂದರ್ಭ ಹಲ್ಲೆ; ಮೂವರ ಬಂಧನ

ಮಂಗಳೂರು, ನ.28: ನಿಟ್ಟೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ತನ್ನ ಸಹಪಾಠಿಯೊಂದಿಗೆ ಆಕೆಯ ಪಕ್ಕದಲ್ಲಿ ಕುಳಿತುಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ನಿವಾಸಿಗಳಾದ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿ ನಿವಾಸಿ ರಾಕೇಶ್ ಬಂಧಿತರು.

ನವೆಂಬರ್ 24 ರಂದು ನಂತೂರಿನಲ್ಲಿ ಆರೋಪಿಗಳು ರಶೀಮ್ ಉಮ್ಮರ್ ಮೇಲೆ ಹಲ್ಲೆ ನಡೆಸಿದ್ದರು. ಯಾರಿಗಾದರೂ ವಿಷಯ ತಿಳಿಸಿದರೆ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ರಶೀಂ ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Latest Indian news

Popular Stories