ಸಾಲ ಮರು ಪಾವತಿಸದಕ್ಕೆ ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹಾಯಿಸಿದ ರಿಕವರಿ ಏಜೆಂಟ್ – ಕೊಲೆ

ಹಜಾರಿಬಾಗ್: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಫೈನಾನ್ಸ್ ಕಂಪನಿಯೊಂದರ ರಿಕವರಿ ಏಜೆಂಟ್‌ನಿಂದ ಟ್ರ್ಯಾಕ್ಟರ್‌ನ ಚಕ್ರಗಳ ಅಡಿಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಇಚ್ಚಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ವಿಶೇಷ ಸಾಮರ್ಥ್ಯ ಹೊಂದಿರುವ ರೈತನ ಮಗಳಾಗಿದ್ದು, ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದಳು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ಎಎನ್‌ಐಗೆ ಟ್ರಾಕ್ಟರ್ ಹಿಂಪಡೆಯಲು ರೈತನ ಮನೆಗೆ ಬಂದಾಗ ಫೈನಾನ್ಸ್ ಕಂಪನಿ ಅಧಿಕಾರಿ ಮತ್ತು ರೈತರ ನಡುವೆ ವಾಗ್ವಾದ ನಡೆಯಿತು. ವಾಗ್ವಾದದ ನಂತರ, ಅವರ ಮಗಳು ಟ್ರ್ಯಾಕ್ಟರ್‌ನ ಚಕ್ರಗಳ ಅಡಿಯಲ್ಲಿ ನಜ್ಜುಗುಜ್ಜಾಗಿದ್ದಾಳೆ.

ಖಾಸಗಿ ಫೈನಾನ್ಸ್ ಕಂಪನಿಯ ರಿಕವರಿ ಏಜೆಂಟ್ ಮತ್ತು ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ,” ಎಂದು ಡಿಎಸ್ಪಿ ತಿಳಿಸಿದ್ದಾರೆ.

ಮಹೀಂದ್ರಾ ಫೈನಾನ್ಸ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡದೆ ಆಕೆಯ ಮನೆಗೆ ಬಂದಿದ್ದರು ಎಂದು ಸಂತ್ರಸ್ತೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

Latest Indian news

Popular Stories