“ಸಿದ್ಧರಾಮೋತ್ಸವ” – ದಾವಣಗೆರೆಯಲ್ಲಿ ಕಿಕ್ಕಿರಿದು ಸೇರಿದ ಅಭಿಮಾನಿಗಳು!

ಬೆಂಗಳೂರು: ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಹಿನ್ನೆಲೆ ನಿರೀಕ್ಷೆಗೆ ತಕ್ಕಂತೆ ಅಭಿಮಾನಿಗಳು ಜಮಾಯಿಸಿದ್ದು, ಈಗಾಗಲೇ 4 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಿದ್ದು, ಕಾರ್ಯಕ್ರಮದಲ್ಲಿ ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದಾರೆ.

ದಾವಣಗೆರೆ ನಗರದಲ್ಲಿ ಜನ ಸಾಗರ ತುಂಬಿ ತುಳುಕುತ್ತಿದ್ದು ಸಾವಿರಾರು ವಾಹನಗಳು ನಗರ ಪ್ರವೇಶಿಸಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ಅಭಿಮಾನಿಗಳು ಜಯಕರ ಘೋಷಣೆಯೊಂದಿಗೆ ವಾಹನಗಳನ್ನು ದೂರದಲ್ಲಿ ನಿಲ್ಲಿಸಿ ನಡೆದುಕೊಂಡು ಬರುತ್ತಿರುವುದು ಕಂಡು ಬಂದಿದೆ.

ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಹಿನ್ನೆಲೆ ಮುಖ್ಯ ವೇದಿಕೆಯಲ್ಲಿ 11 ನಾಯಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಹರಿಪ್ರಸಾದ್, ಕೆ.ಸಿ.ವೇಣುಗೋಪಾಲ್ ಹಾಗೂ ಎಂ.ಬಿ.ಪಾಟೀಲ್, ಪರಮೇಶ್ವರ್ ಸೇರಿ 11 ನಾಯಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

Latest Indian news

Popular Stories