1842 ಮತದಾನ ಕೇಂದ್ರಗಳನ್ನು ಮತಯಂತ್ರದೊಂದಿಗೆ ಮತಗಟ್ಟೆ ತಲುಪಿದ ಸಿಬ್ಬಂದಿ

ಉಡುಪಿ, ಏಪ್ರಿಲ್ 25 : ಜಿಲ್ಲೆಯ ಪ್ರತಿಯೊಂದು ಮತದಾನ ಕೇಂದ್ರದಲ್ಲಿ ಪ್ರತಿಕ್ಷಣದ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಇಂದು ಸಂಜೆ ಎಲ್ಲಾ ಮತದಾನ ಕೇಂದ್ರಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಯಂತ್ರ ಹಾಗೂ ಮತ್ತಿತರ ಪರಿಕರಗಳನ್ನು ಸುರಕ್ಷಿತವಾಗಿ ತಲುಪಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ಅವರು ತಮ್ಮ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಚುನಾವಣೆ ಕುರಿತ ಮಾಹಿತಿ ಸಂಗ್ರಹಣೆಗೆ ಸ್ಥಾಪಿಸಿರುವ ವಾರ್ ರೂಮ್ ನಲ್ಲಿ ಮಾಹಿತಿಗಳನ್ನು ಪಡೆದು ಮಾತನಾಡುತ್ತಿದ್ದರು.

ಇಂದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ 1842 ಮತದಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಷ್ಟಿçಂಗ್ ಸೆಂಟರ್‌ನಿAದ ಮತಯಂತ್ರಗಳು, ಚುನಾವಣೆಗೆ ಅಗತ್ಯವಿರುವ ಪರಿಕರಗಳನ್ನು ಪಡೆದು ಸಂಜೆ 4ಗಂಟೆಯ ಹೊತ್ತಿಗೆ ಶೇಕಾಡ 90 ರಷ್ಟು ತಲುಪಿದ್ದರು, ಸಂಜೆ 6.50 ರ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಮತದಾನ ಕೇಂದ್ರಗಳನ್ನು ಸುರಕ್ಷಿವಾಗಿ ತಲುಪಿದ ಮಾಹಿತಿ ಪಡೆಯಲಾಗಿದೆ. ನಾಳೆ ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ ಮಾಡಲು ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಸಹ ಕೈಗೊಂಡಿದ್ದಾರೆ ಎಂದರು.

ಉಡುಪಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ 866 ಮತ ಕೇಂದ್ರಗಳಿಗೆ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಯಂತ್ರಗಳನ್ನು ಕೊಂಡೊಯ್ಯಲು 252 ಜಿ.ಪಿ.ಎಸ್ ಅಳವಡಿಸಿದ ಬಸ್ ಹಾಗೂ ಇತರೆ ಲಘು ವಾಹನಗಳನ್ನು ಬಳಸಲಾಗಿತ್ತು. ಈ ವಾಹನಗಳ ಜಿ.ಪಿ.ಎಸ್ ಟ್ರಾö್ಯಕಿಂಗ್ ಅನ್ನು ವಾರ್‌ರೂಮಿನಲ್ಲಿ ಮಾಹಿತಿ ಪಡೆಯಲಾಗಿದೆ ಎಂದರು.
,
ಮತದಾನ ಕೇಂದ್ರಗಳಲ್ಲಿ ಮತಯಂತ್ರಗಳ ನೂನ್ಯತೆ, ಮತದಾನ ಕೇಂದ್ರಗಳ ಬಳಿ ಕಾನೂನು ಸುವ್ಯವಸ್ಥೆ ತೊಂದರೆ ಉಂಟಾದಲ್ಲಿ ಕ್ಷಣದಲ್ಲಿ ಮಾಹಿತಿ ಲಭ್ಯವಾಗುತ್ತಿರುವ ಹಿನ್ನಲೆ ಅಗತ್ಯ ನೆರವನ್ನು ನೀಡಲು ಕ್ರಮ ವಹಿಸಿ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಅನುವು ಮಾಡಕೊಡಲಾಗುವುದು ಎಂದರು.
ಪ್ರತೀ ಮತದಾನ ಕೇಂದ್ರದಿAದ ಎರಡು ಗಂಟೆಗಳಿಗೊಮ್ಮೆ ಶೇಕಡವಾರು ಮತದಾನ ಆಗಿರುವ ಬಗ್ಗೆ ಮಾಹಿತಿಯನ್ನು ಪಡೆಯಲಾಗುವುದು ಎಂದ ಅವರು ಪ್ರತೀ ಎರಡು ಗಂಟೆಗಳಿಗೊಮ್ಮೆ ಶೇಕಡವಾರು ಮತದಾನ ವಿವರವನ್ನು ಮಾಧ್ಯಮ ಪ್ರತಿನಿಧಿಗಳಿಗೆ ನೀಡಲು ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದರು.

ಮತದಾನ ಕೇಂದ್ರಗಳ ವೆಬ್‌ಕಾಸ್ಟಿಂಗ್‌ನ ವೀಕ್ಷಿಸಲು, ವಾಹನಗಳ ಜಿ.ಪಿ.ಎಸ್ ಟ್ರಾö್ಯಕಿಂಗ್ ವ್ಯವಸ್ಥೆಯನ್ನು ವೀಕ್ಷಿಸಲು, ಇ.ವಿ.ಎಂ ಗಳ ಸಮಸ್ಯೆ ಉಂಟಾದಲ್ಲಿ ಅವುಗಳನ್ನು ಬಗೆಹರಿಸಲು ಜಿಲ್ಲಾ ಮಟ್ಟದ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಬೆಳಗ್ಗೆ 5.30 ರಿಂದ ಸಂಜೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾರ್ಯನಿರ್ವಹಿಸಲಿವೆ ಎಂದರು.

ಜಿಲ್ಲೆಯಲ್ಲಿ 866 ಮತದಾನ ಕೇಂದ್ರಗಳಿದ್ದು, ಅವುಗಳಲ್ಲಿ 791 ಮತಗಟ್ಟೆ ಕೇಂದ್ರಗಳಿಗೆ ವೆಬ್‌ಕಾಸ್ಟಿಂಗ್ ಅಳವಡಿಸಿದ್ದು, ಈ ಮತಗಟ್ಟೆಗಳಲ್ಲಿ ನಡೆಯುವ ಪ್ರತಿಯೊಂದು ಕ್ಷಣವನ್ನು ನೇರವಾಗಿ ವಾರ್‌ರೂಮಿನಿಂದ ವೀಕ್ಷಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೈಗಾರಿಕಾ ಕೆಂದ್ರದ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾಧಿಕಾರಿ ಕಚೇರಿಯ ವಾರ್ ರೂಮ್ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest Indian news

Popular Stories