ಟ್ರಕ್ ಗೆ ಕಾರು ಡಿಕ್ಕಿ | ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್ ಒಂದಕ್ಕೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಲ್ಗೊಂಡದ ಕೊಡಾಡ್ ಪಟ್ಟಣದ ದುರ್ಗಾಪುರಂ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ಹೈದರಾಬಾದ್ ಮೂಲದ ಮಾಣಿಕ್ಯಮ್ಮ, ಚಂದರ್ ರಾವ್, ಕೃಷ್ಣಂ ರಾಜು, ಸ್ವರ್ಣ, ಶ್ರೀಕಾಂತ್ ಮತ್ತು ಲಾಸ್ಯ ಎಂದು ಗುರುತಿಸಲಾಗಿದೆ.

ಕಾರು ಹೈದರಾಬಾದ್‌ನಿಂದ ವಿಜಯವಾಡಕ್ಕೆ ಹೋಗುತ್ತಿದ್ದಾಗ ಮುತ್ತಂಗಿ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಮಹಿಳೆ ಮತ್ತು ಮಗು ಸೇರಿದಂತೆ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಳೆದ ಮೂರೂ ದಿನಗಳ ಹಿಂದೆಯೂ ಈ ಪ್ರದೇಶದಲ್ಲಿ ಇದೇ ರೀತಿಯ ಅಪಘಾತವೊಂದು ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದರು ಎನ್ನಲಾಗಿದೆ.

Latest Indian news

Popular Stories