ಜನತಾ ದಳ (ಜಾತ್ಯತೀತ) ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಒಳಗೊಂಡ ಲೈಂಗಿಕ ಹಗರಣದ ಬಗ್ಗೆ ದೇಶಾದ್ಯಂತ ಕೋಲಾಹಲ ಎದ್ದಿದ್ದು, ಈ ವಿವಾದವು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಆಕ್ರೋಶವನ್ನು ಹುಟ್ಟುಹಾಕಿದೆ.
ಇದೀಗ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಮತ್ತು ಬಿಜೆಪಿಯ ಪಾಲುದಾರ ಜಯಂತ್ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇವಣ್ಣ ತಪ್ಪಿತಸ್ಥರೆಂದು ಸಾಬೀತಾದರೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಸಿಂಗ್ ಅವರು ಟ್ವೀಟ್ನಲ್ಲಿ “ಉದ್ದೇಶಿತ ಕೃತ್ಯ” ವನ್ನು ಖಂಡಿಸಿದರು. ವಿಶೇಷವಾಗಿ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ ಕಾನೂನಡಿಯಲ್ಲಿ ನ್ಯಾಯ ದೊರಕಿಸುವುದು ಅಗತ್ಯ ಎಂದಿದ್ದಾರೆ.
ಇದೀಗ ಈ ಪ್ರಕರಣವು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದ್ದು ಜೆಡಿಎಸ್ ಸಂಸದನ ಲೈಂಗಿಕ ಹಗರಣವು ಬಿಜೆಪಿ ಎನ್.ಡಿ.ಎ ಮೈತ್ರಿಕೂಟದಲ್ಲೇ ಬಿರುಗಾಳಿ ಎಬ್ಬಿಸಿದೆ.