ಬ್ರೇಕಿಂಗ್ ನ್ಯೂಸ್:ಮದುವೆ ಊಟದ ನಂತರ 70 ಕ್ಕೂ ಅಧಿಕ ಜನ ಅಸ್ವಸ್ಥ

ಕೊಪ್ಪ ಗ್ರಾಮದ ದೊಡ್ಡಸೂರಿನಲ್ಲಿ ನಡೆದ ಘಟನೆಯೊಂದರಲ್ಲಿ ಮದುವೆ ಕಾರ್ಯಕ್ರಮದ ಔತಣಕೂಟದಲ್ಲಿ ಪಾಲ್ಗೊಂಡಿದ್ದ 70ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ.

ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬೆಡ್ ಇಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಗಿ ನೆಲದಲ್ಲೇ ಚಿಕಿತ್ಸೆ ಪಡೆಯಬೇಕಾಗಿ ಬಂದಿದೆ.

ಕುಶಾಲನಗರದ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಗಳಲ್ಲಿಯೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಮಂತರ್ ಗೌಡರವರು ಆಸ್ಪತ್ರೆಗೆ ಧಾವಿಸಿ ಸಂತ್ರಸ್ತರಿಗೆ ದೈರ್ಯ ತುಂಬಿ ಸಾಂತ್ವನ ನೀಡಿದರು.ತ್ವರಿತ ಚಿಕಿತ್ಸೆಯನ್ನು ನೀಡುವುದಕ್ಕೆ ಸಂಬಂದಿಸಿದ ವೈದ್ಯರುಗಳಿಗೆ ಸೂಚನೆ ನೀಡಿದ್ದಾರೆ.

Latest Indian news

Popular Stories