ಬೈಂದೂರು: ನಾನು ದೇಶಕ್ಕೆ ಮತ ಹಾಕಿದ್ದೇನೆ – ಮತದಾನ ಮಾಡಿದ ರಿಷಬ್ ಶೆಟ್ಟಿ

ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೈಂದೂರಲ್ಲಿ ನಟ ರಿಷಬ್ ಶೆಟ್ಟಿ ಮತದಾನ ಮಾಡಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ದೇಶಕ್ಕೆ ಮತ ಹಾಕಿದ್ದೇನೆ. ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕೆ. ಮತದಾನ ನಮ್ಮ ಹಕ್ಕು ಜವಾಬ್ದಾರಿ ಅದನ್ನು ಚಲಾಯಿಸಿದ್ದೇನೆ ಎಂದರು.

ಜನ ಕಮ್ಮಿ ಇರ್ತಾರೆ ಅಂತ ಸಂಜೆ ಬಂದಿದ್ದೇನೆ. ಸರ್ಕಾರದ ನಿರೀಕ್ಷೆ ಬೇಡಿಕೆ ಬಗ್ಗೆ ಮಾತಾಡಲ್ಲ ಜಾಸ್ತಿ ರಾಜಕೀಯದ ಬಗ್ಗೆ ಮಾತನಾಡಲ್ಲ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಎಂದು ಹೇಳಿದರು.

ತಾನು ಓದಿದ ಶಾಲೆಯಲ್ಲಿ ಮತದಾನ ಮಾಡಿದ ರಿಷಬ್, ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟ ಆಡಲು ದೊಡ್ಡ ಮಾಡಿದ್ದೇವೆ.‌ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದರುಮ

ಕಾಂತಾರ ಚಿತ್ರದ ಬಗ್ಗೆ ನಟ ರಿಷಬ್ ಶೆಟ್ಟಿ ಮಾತನಾಡಿ, ಜನ ಸಿನಿಮಾವನ್ನು ಥೇಟರಲ್ಲಿ ನೋಡಿದ್ರೆ ಒಳ್ಳೆಯದು. ಇತ್ತೀಚಿನ ದಿನದಲ್ಲಿ ನ್ಯೂಸ್ ಚಾನೆಲ್ ನಲ್ಲಿ ಹೆಚ್ಚು ಸಿನಿಮಾದ ಬಗ್ಗೆ ನೋಡುತ್ತಿದ್ದಾರೆ.‌ಅಧಿಕೃತವಾಗಿ ಹೊಂಬಾಳೆ ಎಲ್ಲವನ್ನೂ ಘೋಷಣೆ ಮಾಡುತ್ತದೆ ಎಂದರು.

ಕಥೆನೂ ನ್ಯೂಸ್ ಚಾನೆಲ್ ನಲ್ಲಿ ಹೇಳಿದರೆ ಕಷ್ಟ.‌ಈಗಾಗಲೇ ಚಿತ್ರೀಕರಣ ಆರಂಭವಾಗಿದೆ. ಶೂಟಿಂಗ್ ಶುರುವಾಗಿದೆ ಬಹಳ ಚೆನ್ನಾಗಿ ನಡೀತಾ ಇದೆ . ನಾವು ಅಂದುಕೊಂಡಂತೆ ಕೆಲಸ ನಡೆಯುತ್ತಿದೆ. ಮೊದಲಿಗಿಂತ ದೊಡ್ಡ ಜವಾಬ್ದಾರಿ ಅದರಿಂದ ದೊಡ್ಡ ತಂಡ ಕೆಲಸ ಮಾಡುತ್ತಿದೆ.ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್ ಗೆ ಒಂದು ಪುಣ್ಯ ಎಂದರು.

ಅದ್ಭುತವಾದ ಟೆಕ್ನಿಷಿಯನ್ಸ್ ಗಳು ಕೆಲಸ‌ ಮಾಡುತ್ತಿದ್ದಾರೆ.ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ.
ಯಾವ ಒತ್ತಡವು ಇಲ್ಲ ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು .ಸಿನಿಮಾ ಒಂದು ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದರು.

ಸಿನಿಮಾ ಗೋಸ್ಕರ ಒಂದು ವರ್ಷದಿಂದ ಗಡ್ಡ ಕೂದಲು ಬಿಟ್ಟಿದ್ದೇನೆ. ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಸೆಟ್ ವರ್ಕ್ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ.‌ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ. ಅಂತೆ ಕಂತೆಗಳ ಸುದ್ದಿ ಬಹಳಷ್ಟು ಹರಿದಾಡುತ್ತಿದೆ . ಚಿತ್ರದ ಬಗ್ಗೆ ಜನಕ್ಕೆ ನಿರೀಕ್ಷೆ ಹೋಗಬಾರದು. ಚಿತ್ರ ತೆರೆಗೆ ಬರುವ ತನಕ ಗೌಪ್ಯತೆ ಕಾಪಾಡಬೇಕು ಜನಕ್ಕೆ ಕುತೂಹಲ ಇರಬೇಕು ಎಂದು ಹೇಳಿದರು. ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದರು.

Latest Indian news

Popular Stories