ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ – ಸಂಸದ ಜಿ.ಎಮ್ ಸಿದ್ದೇಶ್ವರ

ದಾವಣಗೆರೆ: ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಹೇಗೂ ಕಂಗಲಾಗಿದ್ದಾರೆ. ಇದೀಗ ಜನರಿಂದ ಇದರ ಕುರಿತು ಆಕ್ರೋಶ ಎದುರಿಸಿ ಎದುರಿಸಿ ಸಂಸದರು ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ಇದೀಗ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ ಅವರು ಈ ಕುರಿತು ಪ್ರತಿಕ್ರಿಯಿಸಿ ಪದೇ ಪದೇ ಪೆಟ್ರೋಲ್ ಬೆಲೆ ಏರಿಕೆ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಅಂಗಲಾಚಿದ್ದಾರೆ.

ಪೆಟ್ರೋಲ್ ಬೆಲೆ ಅಂತರಾಷ್ಟ್ರೀಯ ವಿಚಾರ ಎಂದ ಜಿಎಂ ಸಿದ್ದೇಶ್ವರ್, ಸಾರ್ವಜನಿಕರು ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಆಕ್ರೋಶಗೊಂಡಿಲ್ಲ. ಪೆಟ್ರೋಲ್ ಬೆಲೆ ಹೆಚ್ಚಳದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ. ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಬಹುದು ಎಂದು ಅವರು ವಿನಂತಿಯನ್ನೂ ಸಹ ಮಾಡಿಕೊಂಡಿದ್ದಾರೆ.

Latest Indian news

Popular Stories