ಕುಂದಾಪುರ ಶಿಕ್ಷಕನ ರಾಜ್ಯ ಪ್ರಶಸ್ತಿಗೆ ಸರಕಾರ ತಡೆ

ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರ ಹೆಸರಿಗೆ ಕೊನೆಯ ಕ್ಷಣದಲ್ಲಿ ರಾಜ್ಯ ಸರಕಾರ ತಡೆ ನೀಡಿದೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿದ್ದಾಗ ಹಿಜಾಬ್‌ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆವರಣದಲ್ಲೇ ತಡೆದು ಪ್ರವೇಶ ನಿರಾಕರಿಸಿದ್ದರು.

ಇದೀಗ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಅವರಿಗೆ ರಾಜ್ಯ ಪ್ರಶಸ್ತಿ ಪ್ರಕಟಗೊಂಡಿದ್ದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಆಕ್ರೋಶಕ್ಕೆ ಮಣಿದ ಸರಕಾರ ರಾಮಕೃಷ್ಣ ಅವರ ಪ್ರಶಸ್ತಿಗೆ ತಡೆ ನೀಡಿದೆ ಎಂದು ತಿಳಿದುಬಂದಿದೆ.

Latest Indian news

Popular Stories