ಬೆಳ್ತಂಗಡಿ, ಮೇ 24: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಪುರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೇ 22 ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಚುನಾವಣಾ ವಿಜಯೋತ್ಸವದ ವೇಳೆ ಶಾಸಕ ಹರೀಶ್ ಪೂಂಜಾ ಅವರು 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ದೂರಿನಲ್ಲಿ ಮೊಹಮ್ಮದ್ ರಿಯಾಝ್ ಹೇಳಿದ್ದಾರೆ. ಘಟನೆಯ ವಿಡಿಯೋವನ್ನು ಕೂಡ ರಿಯಾಜ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ಇಂತಹ ಆರೋಪ ಸರಿಯಲ್ಲ ಎಂದು ಮಹಮ್ಮದ್ ರಿಯಾಜ್ ಹೇಳಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ, ಹೇಳಿಕೆ ಕುರಿತು ಹರೀಶ್ ಪೂಂಜಾ ಅವರನ್ನು ಪ್ರಶ್ನಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರು.