ಬೆಂಗಳೂರು: 26 ಪಕ್ಷಗಳು ಇಂದು ಸಭೆ ನಡೆಸಿ ಬಿಜೆಪಿಯ ವಿರುದ್ಧ “INDIA” ಮೈತ್ರಿಕೂಟಕ್ಕೆ ನಾಂದಿಹಾಡಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿಯವರು, “ಎನ್ಡಿಎ, ಬಿಜೆಪಿ ನೀವು INDIA ಸವಾಲು ಹಾಕಬಹುದೇ?” ಹೇಳಿದರು.
“ನಾವು ನಮ್ಮ ಮಾತೃಭೂಮಿಯನ್ನು ಪ್ರೀತಿಸುತ್ತೇವೆ. ನಾವು ದೇಶದ ದೇಶಭಕ್ತರು. ನಾವು ದೇಶಕ್ಕಾಗಿ, ಜಗತ್ತು, ರೈತರು, ಎಲ್ಲರಿಗಾಗಿ — ಹಿಂದೂಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಬಂಗಾಳ ಮತ್ತು ಮಣಿಪುರದಲ್ಲಿ — ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ, ಅವರ ಏಕೈಕ ಕೆಲಸ ಸರ್ಕಾರಗಳನ್ನು ಖರೀದಿಸುವುದು ಮತ್ತು ಮಾರಾಟ ಮಾಡುವುದು” ಎಂದು ತೀವ್ರವಾಗಿ ಟೀಕಿಸಿದ್ದಾರೆ.
ಎನ್ಡಿಎ ಸಭೆಯನ್ನು ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ, ಎನ್ಡಿಎ ಮೈತ್ರಿಕೂಟದಲ್ಲಿ 30 ಪಕ್ಷಗಳಿವೆ, ಅದರ ಹೆಸರು ಗೊತ್ತಿಲ್ಲ. ಸದ್ಯ ತುಕುಡೆ ತುಕುಡೆಯಾಗಿರುವ ಮೈತ್ರಿ ಪಕ್ಷಗಳನ್ನು ಒಂದು ಮಾಡಲು ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ನಾಶ ಮಾಡಲು ಹೊರಟಿದೆ. ಸಂವಿಧಾನ ನಾಶ ಮಾಡಲಿ ಹೊರಟಿದ್ದಾರೆ. ಸ್ವಾಯತ್ತ ಸಂಸ್ಥೆಗಳ ದುರ್ಬಳಕೆಮಾಡಿಕೊಂಡು ವಿಪಕ್ಷಗಳ ವಿರುದ್ದ ಆಯುಧವಾಗಿ ಬಳಸುತ್ತಿದ್ದಾರೆ. ದೇಶದ ರಕ್ಷಣೆ ನಮ್ಮ ಹೊಣೆ ಅದೇ ನಮ್ಮ ಮೊದಲ ಆದ್ಯತೆಯಾಗಿದೆ. ಎಲ್ಲ ಪಕ್ಷಗಳ ನಾಯಕರು ಇದಕ್ಕೆ ಸಲಹೆ ನೀಡಿದ್ದಾರೆ ಎಂದರು.