ನಟ ದರ್ಶನ್ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಮನೆ ಊಟ, ಹಾಸಿಗೆ, ಬಟ್ಟೆ ಬೇಕು ಎಂದು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಕುರಿತಂತೆ 24ನೇ ಎಸಿಎಂಎಂ ಕೋರ್ಟ್ ಇಂದು (ಜು.25) ಆದೇಶ ನೀಡಿದೆ.
ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ ಎಂದು ಕಾರಣ ನೀಡಿ ದರ್ಶನ್ ಅವರು ಮನೆಯ ಊಟ ತರಿಸಲು ಅನುಮತಿ ಕೇಳಿದ್ದರು. ಜೈಲು ಅಧಿನಿಯಮ ಉಲ್ಲೇಖಿಸಿ ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು. ಇನ್ನೂ ಹಲವು ದಿನಗಳ ಕಾಲ ದರ್ಶನ್ ಜೈಲೂಟ ಮಾಡುವುದು ಅನಿವಾರ್ಯ ಆಗಿದೆ.