ಲೋಕಸಭೆ ಸಂಸದೆ ಕಂಗನಾ ರಣಾವತ್ ಹೊಸ ವಿವಾದ!

ಲೋಕಸಭೆ ಸಂಸದೆ ಕಂಗನಾ ರಣಾವತ್ ಅವರು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಬುಧವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಶಾಸ್ತ್ರಿ ಅವರ 120 ನೇ ಜನ್ಮ ವಾರ್ಷಿಕೋತ್ಸವದಂದು ನಟಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪೋಸ್ಟ್‌ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಥಾನಮಾನವನ್ನು ಕಾಂಗ್ರೆಸ್ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.

ತನ್ನ ಇನ್ಸ್ಟಾಗ್ರಾಮ್’ನಲ್ಲಿ ಪೋಸ್ಟ್ ಮಾಡಿದ ಕಂಗನಾ ರನೌತ್, “ದೇಶ್ ಕೆ ಪಿತಾ ನಹೀ, ದೇಶ್ ಕೆ ತೋ ಲಾಲ್ ಹೋತೇ ಹೈ. ಧನ್ಯವಾದಗಳು ಭಾರತ್ ಮಾ ಕೆ ಯೇ ಲಾಲ್ (‘ದೇಶಕ್ಕೆ ತಂದೆ ಇಲ್ಲ; ಅದಕ್ಕೆ ಮಕ್ಕಳಿದ್ದಾರೆ. ಭಾರತಮಾತೆಯ ಈ ಮಕ್ಕಳು ಧನ್ಯರು)’ ಎಂದು ಪೋಸ್ಟ್ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಮತ್ತೊಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಮಂಡಿ ಸಂಸದೆ ದೇಶದಲ್ಲಿ ಗಾಂಧಿಯವರ ಸ್ವಚ್ಛತೆಯ ಪರಂಪರೆಯನ್ನು ಮಂದುವರಿಸಿದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ.

ಇದೀಗ ಕಾಂಗ್ರೆಸ್ ಸಂಸದೆಯ ಹೇಳಿಕೆಯನ್ನು ಖಂಡಿಸಿದೆ..

Latest Indian news

Popular Stories