ಮಂಗಳೂರು: ದ್ವೇಷ ಭಾಷಣ ಮಾಡಿದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಹಿಂದೂಗಳು ಹಿಂದೂಗಳ ಕಲ್ಯಾಣ ಮಂಟಪದಲ್ಲೇ‌ ಮದುವೆಯಾಗಬೇಕು. ಹಿಂದೂಗಳು ತಮ್ಮ ಮಕ್ಕಳನ್ನು ಹಿಂದೂ ಆಡಳಿತದ ಶಾಲೆಗಳಿಗೆ ದಾಖಲು ಮಾಡಬೇಕು ಮೊದಲಾದ ಧಾರ್ಮಿಕ ದ್ವೇಷದ ಭಾಷಣ ಮಾಡಿದ ಖಾಸಗಿ ಸಂಸ್ಥೆಯ ಶಿಕ್ಷಕ ಡಾ. ಅರುಣ್ ಉಳ್ಳಾಲ ಎಂಬವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರದ ಹೊರವಲಯದ ಕಿನ್ಯದ ಕೇಶವ ಶಿಶು ಮಂದಿರದಲ್ಲಿ ಇತ್ತೀಚಿಗೆ ನಡೆದ ನವ ದಂಪತಿಗಳ ಸಮಾವೇಶದಲ್ಲಿ ಅವರು ಈ ವಿವಾದಾತ್ಮಕ ಭಾಷಣ ಮಾಡಿದ್ದರು.

“ಹಿಂದುಗಳು, ಹಿಂದು ಮಾಲಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು, ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು, ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು, ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ…” ಮೊದಲಾದ ದ್ವೇಷದ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

“ಧರ್ಮ ದ್ವೇಷದ ಭಾಷಣ ಮಾಡಿದ ಶಿಕ್ಷಕ ಡಾ. ಅರುಣ್ ಉಳ್ಳಾಲ್ ಎಬಾಂತನ ಮೇಲೆ ದಿನಾಂಕ 05/10/2024 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂ 118/2024 ಕಲಂ; 66(C) IT ACT AND 196,351 (BNS), 2023 ರಂತೆ ಪ್ರಕರಣ ದಾಖಲು ಮಾಡಲಾಗಿದೆ” ಎಂದು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Latest Indian news

Popular Stories