ಮಂಗಳೂರು: ಶಂಕಿತ ಡೆಂಗ್ಯೂ ಜ್ವರಕ್ಕೆ ವ್ಯಕ್ತಿ ಮೃತ್ಯು

ಮಂಗಳೂರು: ಶಂಕಿತ ಡೆಂಗ್ಯೂ ಜ್ವರ ಬಾಧಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಡೆಂಗ್ಯೂ ಮೃತ್ಯು ಪ್ರಕರಣ ಎಂದು ಹೇಳಲಾಗುತ್ತಿದೆ.

ಬಂಟ್ವಾಳ ತಾಲೂಕಿನ ಶಂಭೂರು ಮೂಲದ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಯತೀಶ್(50) ಮೃತಪಟ್ಟ ವ್ಯಕ್ತಿ.

ಜು.10ರಂದು ಯತೀಶ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು‌. ವಿಪರೀತ ಜ್ವರದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗೆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯತೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Latest Indian news

Popular Stories