ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಆರು ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆದೇಶಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜಾ.ದಳ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟ ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.