ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿ ಸಹೋದರ ಬಂಧನ

ಚಿತ್ರ: ಗೋಪಾಲ್ ಜೋಶಿ

ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರ ಸಹೋದರ ಗೋಪಾಲ್​ ಜೋಶಿ ಅನ್ನು ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ.

ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್‌ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್​ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ.

ಸುನೀತಾ ಚೌಹಾಣ್ ಎಂಬುವವರು ನೀಡಿದ ದೂರಿನ ಮೇರೆಗೆ ಗೋಪಾಲ್‌ ಜೋಶಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ವಿಚಾರಣೆ ಹಾಜರಾಗುವಂತೆ ಸೂಚನೆ ಹಿನ್ನಲೆ ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ್ ಠಾಣೆಗೆ ಸುನೀತಾ ಚೌಹಾಣ್​ ಆಗಮಿಸಿದ್ದರು. ಬಳಿಕ ಅವರನ್ನು ಸ್ಥಳ ಮಹಜರಿಗಾಗಿ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಎಸಿಪಿ ಚಂದನ್​ರೊಂದಿಗೆ ಅಶೋಕನಗರ ಪೊಲೀಸರ ತಂಡದಿಂದ ಗೋಪಾಲ್ ಜೋಶಿ ನಿವಾಸದಲ್ಲಿ ಪಂಚನಾಮೆ ಮಾಡಲಾಗಿದೆ.

Latest Indian news

Popular Stories