ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,ಜನತೆಯೇ ನನ್ನ ಪಾಲಿನ ಜನಾರ್ಧನರು – ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,
ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ.

ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಟ್ವೀಟ್ ಮಾಡಿದ್ದಾರೆ.

Latest Indian news

Popular Stories