ಸಿದ್ದರಾಮಯ್ಯ ಮೇ 20 ರ ಶನಿವಾರ ಪ್ರಮಾಣ ವಚನ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯನವರು ಇದೇ ಶನಿವಾರ ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ ಅದಕ್ಕೆ ಭರದ ಸಿದ್ಧತೆ ಆರಂಭವಾಗಿದೆ. 

ಇಂದು ಸಂಜೆ ಸಿಎಲ್ ಪಿ ಮೀಟಿಂಗ್: ನೂತನ ಮುಖ್ಯಮಂತ್ರಿ ಆಯ್ಕೆಯಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.

Latest Indian news

Popular Stories