ನವ ದೆಹಲಿ: ಮತದಾನ ಮಾಡುವ ಕೆಲವೇ ದಿನಗಳ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಲೋಕಸಭಾ ಅಭ್ಯರ್ಥಿಯನ್ನು ಕಳೆದುಕೊಂಡಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಬಾಮ್ ಇಂದು ಸ್ಪರ್ಧೆಯಿಂದ ಹೊರಬಿದ್ದು ಬಿಜೆಪಿ ಸೇರಿದ್ದಾರೆ.
ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರು ಕಾರಿನಲ್ಲಿ ತೆಗೆದ ಫೋಟೋದಲ್ಲಿ ಅಭ್ಯರ್ಥಿಯು ಬಿಜೆಪಿಗೆ ಸೇರಿದ ಕುರಿತು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ರಾಜ್ಯಾಧ್ಯಕ್ಷ ವಿಡಿ ಶರ್ಮಾ ನೇತೃತ್ವದಲ್ಲಿ ಇಂದೋರ್ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ ಎಂದು ವಿಜಯವರ್ಗಿಯ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
इंदौर से कांग्रेस के लोकसभा प्रत्याशी श्री अक्षय कांति बम जी का माननीय प्रधानमंत्री श्री @narendramodi जी, राष्ट्रीय अध्यक्ष श्री @JPNadda जी, मुख्यमंत्री @DrMohanYadav51 जी व प्रदेश अध्यक्ष श्री @vdsharmabjp जी के नेतृत्व में भाजपा में स्वागत है। pic.twitter.com/1isbdLXphb
— Kailash Vijayvargiya (Modi Ka Parivar) (@KailashOnline) April 29, 2024