ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ : ಹಾಸನ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್

ಹಾಸನ: ಲೋಕಸಭೆ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಡಿ. ದೇವರಾಜೇಗೌಡ ಪುತ್ರ ಡಿ. ಚರಣ್, ಹಾಸನದ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡಿದೆ.

ಹೌದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ಡಿ ದೇವರಾಜೆಗೌಡ ಪುತ್ರ ಡಿ. ಚರಣ್ ಅರ್ಜಿ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್ ನೀಡಿದೆ. ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಆಯ್ಕೆ ಅಸಿಂಧು ಘೋಷಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಸಂಸದರಾಗಿ ಶ್ರೇಯಸ್ ಎಂ ಪಟೇಲ್ ಆಯ್ಕೆ ಅಸಿಂಧುಗೊಳಿಸುವಂತೆ ಮನವಿ ಮಾಡಲಾಗಿತ್ತು. ಹಿಂದಿನ 5 ವರ್ಷಗಳ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣವಾದ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡಿದೆ.

Latest Indian news

Popular Stories