ಕಲ್ಬುರ್ಗಿ : ಭೀಕರ ಅಪಘಾತ,ಮಗು ಸೇರಿ ನಾಲ್ವರು ಮೃತ್ಯು

ಕಲಬುರಗಿ:ನಿನ್ನೆ ತಡರಾತ್ರಿ ಕಮಾಂಡರ್ ಜೀಪ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಮಾಡ್ಯಾಳ ಗ್ರಾಮದ ಸಂತೋಷ ಹೂವಣ್ಣ ಗೌಡಗಾಂವ (40), ಶಂಕರ ದೇವಪ್ಪ ಜಳಕಿ (55), ಸಿದ್ದಮ್ಮ ಶಂಕರ ಜಳಕಿ ಮತ್ತು ಹುಚ್ಚಪ್ಪ ಮಹಾಂತೇಶ ಜಳಕಿ (5 ಎಂದು ಗುರುತಿಸಲಾಗಿದೆ.ಮಗುವಿನ ತಾಯಿ ಪೂಜಾ ಮಹಾಂತೇಶ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜಾ ಅವರು ಗಂಡನ ಜೊತೆ ಜಗಳವಾಡಿ ಇಂಡಿ ತಾಲ್ಲೂಕಿನ ಸುರಗಿಹಳ್ಳಿ ಗ್ರಾಮದಿಂದ ರಾತ್ರಿ 5 ವರ್ಷದ ಮಗುವನ್ನು ಕರೆದು ಕೊಂಡು ಅಫಜಲಪುರಕ್ಕೆ ಬಂದಿದ್ದರು. ಮಗಳನ್ನು ಅಫಜಲಪುರದಿಂದ ಮಾಡ್ಯಾಳಕ್ಕೆ ಕರದೊಯ್ಯಲು ಬಂದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Latest Indian news

Popular Stories