ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಯುವಕನೊಬ್ಬನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ತಡರಾತ್ರಿ ರೋಹನ್ ವಾಕಡೆ (22) ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಹಳೆ ವೈಷಮ್ಯ ಹಿನ್ನಲೆಯಲ್ಲಿ ರೋಹನ್‌ನನ್ನ ಹತ್ಯೆಗೈಯ್ದಿರೋ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದು ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories