ಕಲಬುರಗಿ.ಜೂ.೩೦(ಕ.ವಾ)-ಚಿತ್ತಾಪೂರ ತಾಲೂಕಿನಲ್ಲಿ ದ್ವಿದಳದಾನ್ಯಗಳ ಕ್ಷೇತ್ರ ಹಾಗೂ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ೨೦೨೧-೨೨ನೇ ಸಾಲಿನ ಎನ್.ಎಫ್.ಎಸ್.ಎಂ ಯೋಜನೆಯಡಿ ಚಿತ್ತಾಪುರ ಶಾಸಕರಾದ ಪ್ರಿಯಾಂಕ್ ಎಂ. ಖರ್ಗೆ ಅವರು ಬುಧವಾರ ಚಿತ್ತಾಪೂರ ತಾಲೂಕಿನ ರೈತರಿಗೆ ತೊಗರಿ ಮತ್ತು ಹೆಸರು ಬೀಜಗಳ ಮಿನಿಕಿಟ್ಗಳನ್ನು ಉಚಿತವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ಸಿದ್ದುಗೌಡ ಪಾಟೀಲ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರೆ, ಕೃಷಿ ಅಧಿಕಾರಿ ವಿಲಾಸ ಹರಸೂರ, ಕರಣಕುಮಾರ ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.