ಕಲಬುರಗಿ (ಅ.8): ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅಲ್ಲ, ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಅವರಕಿಂತ ರಾಜ್ಯಕ್ಕೆ ಪ್ರಿಯಾಂಕ್ ಖರ್ಗೆ ಒಳ್ಳೆಯ ಸಿಎಂ ಆಗಿದ್ದಾರೆ ಎಂದು ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಹೇಳಿದ್ದಾರೆ.
ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಕೋಲಿ ಸಮಾಜದ ಯುವಕನ ಹತ್ಯೆ ಆರೋಪಿಗೆ ಪ್ರಿಯಾಂಕ್ ಖರ್ಗೆ ರಕ್ಷಣೆ ನೀಡುತ್ತಿದ್ದಾರೆ.ಅವರೇ ನಿಜವಾದ ಸಿಎಂ ಸಿದ್ದರಾಮಯ್ಯ ಮಾತಿಗೆ ಕವಡೆ ಕಾಸಿನ ಬೆಲೆ ಇಲ್ಲ
ಆರೋಪಿಯನ್ನು ಅರೆಸ್ಟ್ ಮಾಡುವಂತೆ ಸ್ವತಃ ಸಿಎಂ ಹೇಳಿದರೆ ಅರೆಸ್ಟ್ ಆಗಲ್ಲ, ಸೂಪರ್ ಸಿಎಂ ಹೇಳಿದ್ರೆ ಅರೆಸ್ಟ್ ಆಗುತ್ತೆ. ಕಲಬುರಗಿ ಜಿಲ್ಲೆಯಲ್ಲಿ ಸೂಪರ್ ಸಿಎಂ ಏನು ಹೇಳ್ತಾರೋ ಅದೇ ನಡೆಯೋದು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ ಕಾರಿದರು.