ಅನ್‌ಲಾಕ್ ಅವಧಿಯಲ್ಲಿ ದರೋಡೆ, ಕಳ್ಳತನ ಹೆಚ್ಚಳ

ಮೈಸೂರು: ಲಾಕ್‌ಡೌನ್ ಅವಧಿಯಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿದ್ದವು. ಆದರೆ ಅನ್ ಲಾಕ್ ಬಳಿಕ ದರೋಡೆ, ಕಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಮುಗಿದ ಬಳಿಕ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದರು. ಲಾಕ್‌ಡೌನ್ ಸಂದರ್ಭದಲ್ಲಿ ಕ್ರೈಂ ರೇಟ್ ಕಡಿಮೆ ಆಗಿತ್ತು. ಆದರೆ ಅನ್ಲಾಕ್ ಬಳಿಕ ದರೋಡೆ, ಕಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು ನಗರಕ್ಕೆ ಸೀಮಿತವಾಗಿದ್ದ ಸರಗಳ್ಳತನ ಈಗ ಗ್ರಾಮಾಂತರ ಪ್ರದೇಶದಲ್ಲೂ ನಡೆಯುತ್ತಿದೆ ಎಂದರು.
ಸಿAಥೆಟಿಕ್ ಡ್ರಗ್ಸ್ ತಡೆಗಟ್ಟುವ ಚಾಲೆಂಜ್ ನಮಗಿದೆ. 50 ಕೋಟಿ ಅಷ್ಟು ಡ್ರಗ್ ನಾಶ ಮಾಡಿದ್ದೇವೆ. 5 ವರ್ಷದಷ್ಟು ಡ್ರಗ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಕೆಲಸವಾಗುತ್ತಿದೆ. ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್‌ನಲ್ಲಿ ಬರುತ್ತಿದೆ. ಬಹಳ ಸೆಕ್ಯುರಿಟಿಯಲ್ಲಿ ಬರುತ್ತಿದೆ.
ಇದನ್ನು ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದಾರೆ. ಬಹಳಷ್ಟು ಸಾರಿ ಸಾಮಾನ್ಯ ಪೋಸ್ಟ್ï‌ನಲ್ಲಿ ಡ್ರಗ್ಸ್ ಸರಬರಾಜಗುತ್ತದೆ. ಸ್ಯಾಂಡಲ್‌ವುಡ್ ಡ್ರಗ್ ಕೇಸ್ ಸಂಬAಧಿಸಿದAತೆ ವಿದೇಶಿಗರ ಬಂಧನವಾಗಿದೆ. ಕಳೆದ ವರ್ಷದಲ್ಲಿ 15ರಿಂದ 20 ಮಂದಿ ಬಂಧನವಾಗಿದೆ. ಈ ಪೈಕಿ ಆಫ್ರಿಕ ಡ್ರಗ್ಸ್ನವರೇ ಹೆಚ್ಚಿದ್ದಾರೆ ಎಂದು ತಿಳಿಸಿದರು.
ಪೊಲೀಸರ ಮಕ್ಕಳಿಗೆ ಸ್ಕಾಲರ್‌ಶಿಪ್ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ ಪೊಲೀಸರ ಮಕ್ಕಳಿಗೆ ಹಿಂದಿನಿAದಲೂ ಸ್ಕಾಲರ್‌ಶಿಪ್ ವ್ಯವಸ್ಥೆ ಇದೆ. ಈಗ ಇನ್ನಷ್ಟು ಹೆಚ್ಚಿನ ಅನುದಾನ ನೀಡಲು ತೀರ್ಮಾನ ಮಾಡಿದ್ದೇವೆ ಎಂದರು.
ಎಸ್‌ಎಸ್‌ಎಲ್‌ಸಿ ಮತ್ತು ಅದಕ್ಕಿಂತ ಉನ್ನತ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ ಸಿಗಲಿದೆ. ಈ ಯೋಜನೆ ನಿನ್ನೆಯಿಂದ ಆರಂಭ ಆಗಿದೆ. ಪೊಲೀಸರಿಗೆ ವಸತಿ ಗೃಹಗಳ ಸೌಕರ್ಯ ಒದಗಿಸಬೇಕಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ವಸತಿಗೃಹಗಳನ್ನು ಗುರುತಿಸಲಾಗಿದೆ. ರಾಜ್ಯಾದ್ಯಂತ ಸುಮಾರು 100 ಹೊಸ ಕಟ್ಟಡಗಳ ನಿರ್ಮಾಣಕ್ಕೂ ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.
ಕೊರೊನಾ ನಿಯಂತ್ರಣ ವೇಳೆಯಲ್ಲಿ ಪೊಲೀಸರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪೈಕಿ 3ರಿಂದ 4ಸಾವಿರ ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಎಲ್ಲರ ಆರೋಗ್ಯದ ಕಡೆಗೂ ಗಮನ ವಹಿಸಲಾಗುತ್ತಿದೆ. ಮೃತಪಟ್ಟವರ ಸಂಖ್ಯೆ ಕಡಿಮೆ ಇದೆ. ಸೋಂಕಿನಿAದ ಮೃತಪಟ್ಟವರ ಕುಟುಂಬಕ್ಕೆ 30 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೊಲೀಸರ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ವಹಿಸಲಾಗುತ್ತಿದೆ ಎಂದರು.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಗೆ ಲಂಚ ಪಡೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿ ಇಂತಹ ಕೆಲಸಕ್ಕೆಲ್ಲ ಇದೀಗ ಕಡಿವಾಣ ಹಾಕಲಾಗುತ್ತಿದೆ. ಇದು ಹಳೆಯ ಪದ್ದತಿ, ಆದರೆ ಇದಕ್ಕೆ ನಮ್ಮ ಸರ್ಕಾರ ಕಡಿವಾಣ ಹಾಕಿದೆ. ಪೊಲೀಸ್ ಬೋರ್ಡ್ ಬಂದಮೇಲೆ ಹಳೆಯ ಮಾದರಿಯ ವರ್ಗಾವಣೆಯಲ್ಲಿ ವ್ಯವಹಾರ ನಡೆಯದು ಎಂದರು.
ಸಿಎA ರೇಸ್ ಕುರಿತು ಪ್ರತಿಕ್ರಿಯಿಸಿ ನಾನು ಸಿಎಂ ರೇಸ್‌ನಲ್ಲಿ ಇಲ್ಲ. ನಾನು ಈಗ ಹೋಂ ಮಿನಿಸ್ಟರ್ ಹೋಂನಲ್ಲೇ ಇರುತ್ತೇನೆ ಇಷ್ಟೇ ಸಾಕು. ನಾನು ಏನೋ ಹೇಳಿ, ನೀವು ಅದಕ್ಕೆ ಇನ್ನೂ ಯಾರು ಯಾರದೋ ಪ್ರತಿಕ್ರಿಯೆ ಪಡೆಯುತ್ತೀರಿ ಎಂದು ಹಾಸ್ಯ ಚಟಾಕಿ ಹಾರಿಸಿದರು.

Latest Indian news

Popular Stories